Home State Politics National More
STATE NEWS

Dharmasthala ಬುರುಡೆ ಪ್ರಕರಣದಲ್ಲಿ ಮಹಿಳಾ ಆಯೋಗ ಎಂಟ್ರಿ!

Women's Commission enters into Dharmasthala Burude
Posted By: Sagaradventure
Updated on: Nov 5, 2025 | 4:13 AM

ಮಂಗಳೂರು: ​ಧರ್ಮಸ್ಥಳದ ಬುರುಡೆ ಪ್ರಕರಣದ ವಿಚಾರವಾಗಿ ರಾಜ್ಯ ಮಹಿಳಾ ಆಯೋಗ ಎಂಟ್ರಿಯಾಗಿದೆ. ಈ ಸಂದರ್ಭದಲ್ಲಿ, ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (SIT) ದ ಕಾರ್ಯವೈಖರಿ ಕುರಿತು ಆಯೋಗವು ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ತನಿಖೆಯ ದಿಕ್ಕು ಮತ್ತು ವಿಧಾನವು ನಿರೀಕ್ಷಿತ ಮಟ್ಟದಲ್ಲಿಲ್ಲ ಎಂದು ಆಯೋಗವು ಅಭಿಪ್ರಾಯಪಟ್ಟಿದೆ.

​ಈ ಹಿನ್ನೆಲೆಯಲ್ಲಿ ರಾಜ್ಯ ಮಹಿಳಾ ಆಯೋಗವು SIT ಮುಖ್ಯಸ್ಥರಿಗೆ ಅಧಿಕೃತ ಪತ್ರ ಬರೆದಿದೆ. ಮಹಿಳೆಯರಿಗೆ ಸಂಬಂಧಿಸಿದ ಗಂಭೀರ ಪ್ರಕರಣಗಳ ಸಮಗ್ರ ತನಿಖೆಗಾಗಿ SIT ಅನ್ನು ರಚಿಸಲಾಗಿದ್ದರೂ, ಇದುವರೆಗೆ SIT ಆ ದೃಷ್ಟಿಕೋನದಲ್ಲಿ ಪ್ರಕರಣಗಳ ತನಿಖೆಯನ್ನು ಕೈಗೆತ್ತಿಕೊಂಡಿಲ್ಲ ಎಂದು ಆಯೋಗವು ಪತ್ರದಲ್ಲಿ ಉಲ್ಲೇಖಿಸಿದೆ. SIT ಕಾರ್ಯವು ಕೇವಲ ಮಾನವ ಕಳೇಬರಗಳ ಉತ್ಖನನಕ್ಕೆ ಮಾತ್ರ ಸೀಮಿತವಾಗಿದೆ ಎಂದು ಆಯೋಗವು ಅಸಮಾಧಾನ ವ್ಯಕ್ತಪಡಿಸಿದೆ.

​ಮಹಿಳೆಯರು ಮತ್ತು ಯುವತಿಯರ ಅಸಹಜ ಸಾವುಗಳು, ಕೊಲೆ ಪ್ರಕರಣಗಳು ಸೇರಿದಂತೆ ಅನುಮಾನಾಸ್ಪದ ಸಾವುಗಳು ಮತ್ತು ಇತರ ಸಂಬಂಧಿತ ಪ್ರಕರಣಗಳ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಆಯೋಗವು ಪತ್ರದ ಮೂಲಕ SIT ಗೆ ಮನವಿ ಮಾಡಿದೆ. ಒಂದು ವೇಳೆ ಈ ಪ್ರಕರಣಗಳ ತನಿಖೆಯನ್ನು ಈಗಾಗಲೇ ನಡೆಸಿದ್ದರೆ, ಆ ಕುರಿತ ಸಂಪೂರ್ಣ ಮಾಹಿತಿಯನ್ನು ಕೂಡಲೇ ರಾಜ್ಯ ಮಹಿಳಾ ಆಯೋಗಕ್ಕೆ ಒದಗಿಸುವಂತೆಯೂ ಮನವಿ ಮಾಡಲಾಗಿದೆ.

Shorts Shorts