ಬೆಂಗಳೂರು: ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯಾಗಿದ್ದು, ಪ್ರಕರಣದ ತನಿಖೆಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ತಡೆಯಾಜ್ಞೆಯನ್ನು ತೆರವುಗೊಳಿಸಿದೆ. ಈ ಮೂಲಕ ಈ ಪ್ರಕರಣವನ್ನು ವಿಶೇಷ ತನಿಖಾ ದಳ (ಎಸ್ಐಟಿ) ಮುಂದುವರಿಸಲು ಹೈಕೋರ್ಟ್ ಪೀಠವು ಅನುಮತಿ ನೀಡಿದೆ.
ಎಸ್ಐಟಿ ತನಿಖೆಗೆ ಇದ್ದ ತಡೆಯಾಜ್ಞೆ ತೆರವುಗೊಂಡಿರುವುದು ‘ಬುರುಡೆ ಗ್ಯಾಂಗ್’ ಎಂದು ಕರೆಯಲ್ಪಡುವ ಧರ್ಮದ್ರೋಹಿಗಳಿಗೆ ಭಾರೀ ಆಘಾತ ನೀಡಿದೆ ಎನ್ನಲಾಗಿದೆ. ತಡೆಯಾಜ್ಞೆ ತೆರವುಗೊಂಡಿರುವ ಹಿನ್ನೆಲೆಯಲ್ಲಿ, ಪ್ರಮುಖ ಆರೋಪಿಗಳಾದ ಮಹೇಶ ಶೆಟ್ಟಿ ತಿಮರೋಡಿ ಮತ್ತು ಗಿರೀಶ್ ಮಟ್ಟಣ್ಣ ನೇತೃತ್ವದ ತಂಡಕ್ಕೆ ಮತ್ತೆ ಬಂಧನದ ಭೀತಿ ಶುರುವಾಗಿದೆ.
ಈ ಹಿಂದೆ, ಎಸ್ಐಟಿ ಅಧಿಕಾರಿಗಳು ಬುರುಡೆ ಗ್ಯಾಂಗ್ನ ಹಲವು ಸದಸ್ಯರನ್ನು ನಿರಂತರವಾಗಿ ವಿಚಾರಣೆಗೊಳಪಡಿಸಿದ್ದರು. ಆದರೆ, ಹೈಕೋರ್ಟ್ನಿಂದ ತಡೆಯಾಜ್ಞೆ ಬಂದ ಕಾರಣ ತನಿಖೆಗೆ ಹಿನ್ನಡೆಯಾಗಿತ್ತು. ಈಗ ನ್ಯಾಯಾಲಯದಿಂದ ಸ್ಪಷ್ಟ ಆದೇಶ ಬಂದಿರುವ ಹಿನ್ನೆಲೆಯಲ್ಲಿ, ಎಸ್ಐಟಿ ಪೊಲೀಸರು ಮುಂದಿನ ಕ್ರಮಕ್ಕಾಗಿ ಸಿದ್ಧರಾಗಿದ್ದಾರೆ.






