Home State Politics National More
STATE NEWS

ಶಿಕ್ಷಣ ಕ್ಷೇತ್ರಕ್ಕೆ ರಾಜ್ಯ ಸರ್ಕಾರ ಆದ್ಯತೆ ನೀಡುತ್ತಿಲ್ಲ: S.V.ಸಂಕನೂರು ಆರೋಪ

State government is not giving priority to the edu
Posted By: Sagaradventure
Updated on: Nov 24, 2025 | 3:00 PM

ದಾಂಡೇಲಿ(ಉತ್ತರಕನ್ನಡ): ಪ್ರಸ್ತುತ ರಾಜ್ಯ ಸರ್ಕಾರವು ಶಿಕ್ಷಣ ಕ್ಷೇತ್ರಕ್ಕೆ ನೀಡಬೇಕಾದ ಆದ್ಯತೆಯನ್ನು ನೀಡುತ್ತಿಲ್ಲ. ನಿರೀಕ್ಷಿತ ಮಟ್ಟದಲ್ಲಿ ಶಿಕ್ಷಣ ಕ್ಷೇತ್ರವನ್ನು ಪರಿಗಣಿಸದಿರುವುದು ವಿಷಾದನೀಯ ಎಂದು ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರು ಬೇಸರ ವ್ಯಕ್ತಪಡಿಸಿದರು.

​ಸೋಮವಾರ ನಗರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರಾಥಮಿಕ ಹಂತದಿಂದ ಹಿಡಿದು ವಿಶ್ವವಿದ್ಯಾಲಯದವರೆಗೂ ಅನೇಕ ಹುದ್ದೆಗಳು ಖಾಲಿ ಇವೆ. ನಿವೃತ್ತಿ ಹಾಗೂ ರಾಜೀನಾಮೆಯಿಂದ ತೆರವಾಗಿರುವ ಈ ಸ್ಥಾನಗಳನ್ನು ಭರ್ತಿ ಮಾಡುವ ಪ್ರಕ್ರಿಯೆಗೆ ಸರ್ಕಾರ ಈವರೆಗೂ ಮುಂದಾಗಿಲ್ಲ ಎಂದು ಆರೋಪಿಸಿದರು.

​ಹುದ್ದೆಗಳ ನೇಮಕಾತಿಯಲ್ಲಿನ ವಿಳಂಬದಿಂದಾಗಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವುದು ಕಷ್ಟಸಾಧ್ಯವಾಗುತ್ತಿದೆ. ಶಿಕ್ಷಣ ಕ್ಷೇತ್ರದ ಈ ಗಂಭೀರ ಸಮಸ್ಯೆಗಳ ಕುರಿತಂತೆ ನಾನು ಪ್ರತಿ ಬಾರಿಯೂ ಸರ್ಕಾರದ ಗಮನ ಸೆಳೆಯುವ ಪ್ರಯತ್ನ ಮಾಡುತ್ತಲೇ ಇದ್ದೇನೆ ಎಂದು ಅವರು ತಿಳಿಸಿದರು.

​ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ರೋಷನ್ ನೇತ್ರಾವಳಿ ಉಪಸ್ಥಿತರಿದ್ದರು.

Shorts Shorts