Home State Politics National More
STATE NEWS

CM Siddaramaiah ವಿರುದ್ಧ ಮತ್ತೊಂದು ಭೂ ಹಗರಣದ ಆರೋಪ: ₹750 ಕೋಟಿ ಮೌಲ್ಯದ ಸರ್ಕಾರಿ ಜಾಗ ಅಕ್ರಮ ಮಂಜೂರು?

Siddaramaiah (1)
Posted By: Meghana Gowda
Updated on: Dec 4, 2025 | 7:56 AM

ಬೆಂಗಳೂರು: ಮಾಜಿ ಸಚಿವ ಮತ್ತು ಶಾಸಕ ಹೆಚ್.ಡಿ. ರೇವಣ್ಣ (H.D. Revanna)  ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ (Chief Minister Siddaramaiah) ಅವರ ವಿರುದ್ಧ ಮತ್ತೊಂದು ಗಂಭೀರ ಭೂ ಹಗರಣದ (land scam) ಆರೋಪ ಮಾಡಿದ್ದಾರೆ. ಸುಮಾರು ₹750 ಕೋಟಿ ಬೆಲೆ ಬಾಳುವ ಸರ್ಕಾರಿ ಜಾಗವನ್ನು ಅಕ್ರಮವಾಗಿ ಮಂಜೂರು ಮಾಡಲಾಗಿದೆ ಎಂದು ಅವರು ದೂರಿದ್ದಾರೆ.

ಚಿಕ್ಕಗೊಂಡನಹಳ್ಳಿ ಗ್ರಾಮದ ಸರ್ವೆ ನಂ. 7, 10, 25, ಮತ್ತು 106 ರಲ್ಲಿರುವ 73 ಎಕರೆ ಸರ್ಕಾರಿ ಜಮೀನನ್ನು ಅಕ್ರಮವಾಗಿ ಮಂಜೂರು ಮಾಡಲಾಗಿದೆ. ಈ 73 ಎಕರೆ ಜಮೀನನ್ನು ಒಟ್ಟು 97 ಜನರಿಗೆ ಅಕ್ರಮವಾಗಿ ಮಂಜೂರು ಮಾಡಿದ್ದಾರೆ ಎಂದು ರೇವಣ್ಣ ಅವರು ಆರೋಪಿಸಿದ್ದಾರೆ.

ರಿಯಲ್ ಎಸ್ಟೇಟ್ ಮಾಫಿಯಾದವರಿಗೆ (Real Estate Mafia) ಅನುಕೂಲ ಮಾಡಿಕೊಡುವ ಉದ್ದೇಶದಿಂದ ಸಿ.ಎಂ. ಅವರು ಈ ಜಮೀನುಗಳನ್ನು ಅಕ್ರಮವಾಗಿ ಮಂಜೂರು ಮಾಡಿದ್ದಾರೆ ಎಂದು ರೇವಣ್ಣ ಪ್ರಶ್ನಿಸಿದ್ದು,  ಈ ಅಕ್ರಮದ ಕುರಿತು ಈಗಾಗಲೇ ಕಂದಾಯ ಸಚಿವರಿಗೆ ಲಿಖಿತ ದೂರು ನೀಡಿದ್ದೇವೆ ಅವರು ತಿಳಿಸಿದ್ದಾರೆ.

ಈ ಗಂಭೀರ ಆರೋಪಗಳ ಕುರಿತು ಆಡಳಿತ ಪಕ್ಷ ಮತ್ತು ಮುಖ್ಯಮಂತ್ರಿಗಳ ಕಡೆಯಿಂದ ಯಾವ ಸ್ಪಷ್ಟನೆ ಬರುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

Shorts Shorts