ಬೆಂಗಳೂರು: ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಜೂನ್ 27, 2026 ರಂದು ಅತ್ಯಂತ ಅದ್ಧೂರಿಯಾಗಿ ಆಚರಿಸಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ. ಬೆಂಗಳೂರಿನ ಕೆಂಗೇರಿ ಬಳಿಯ ಕೆಂಪೇಗೌಡ ಬಡಾವಣೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದ ಹಿನ್ನೆಲೆಯಲ್ಲಿ, ನಗರದ ಪ್ರಮುಖ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆ ಇರುವುದರಿಂದ ಬೆಂಗಳೂರು ಸಂಚಾರಿ ಪೊಲೀಸರು ಸಂಚಾರ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗಳನ್ನು ಜಾರಿಗೆ ತಂದಿದ್ದಾರೆ.
ಸಂಚಾರ ನಿರ್ಬಂಧದ ವಿವರ (ಬೆಳಗ್ಗೆ 6 ರಿಂದ ಸಂಜೆ 4 ರವರೆಗೆ): ಕಾರ್ಯಕ್ರಮದ ಭದ್ರತೆ ಹಾಗೂ ಸುಗಮ ಸಂಚಾರಕ್ಕಾಗಿ ಕೆಂಗೇರಿ ಉಪನಗರ, ಮೈಸೂರು ರಸ್ತೆ, ಮಾಗಡಿ ಮುಖ್ಯರಸ್ತೆ ಹಾಗೂ ಕೊಮ್ಮಘಟ್ಟ ಸುತ್ತಮುತ್ತಲಿನ ರಸ್ತೆಗಳಲ್ಲಿ ಈ ಕೆಳಗಿನ ನಿರ್ಬಂಧಗಳನ್ನು ವಿಧಿಸಲಾಗಿದೆ:
-
ಸರಕು ವಾಹನಗಳ ಸಂಚಾರ ನಿರ್ಬಂಧ:
-
ಮೈಸೂರು ರಸ್ತೆಯ ಮಾರಿಗೋಲ್ಡ್ ಶಾಲೆಯ ಜಂಕ್ಷನ್ನಿಂದ ಭೀಮನಕುಪ್ಪೆ ಜಂಕ್ಷನ್ ವರೆಗೆ ಸರಕು ಸಾಗಣೆ ವಾಹನಗಳಿಗೆ ಪ್ರವೇಶವಿಲ್ಲ.
-
ಪರ್ಯಾಯ ಮಾರ್ಗ: ಮೈಸೂರು ಮುಖ್ಯ ರಸ್ತೆಯ ಮೂಲಕ ಚಲ್ಲಘಟ್ಟ ಮೆಟ್ರೋ ಸ್ಟೇಷನ್ ಕಡೆಗೆ ಸಾಗಿ, ನೈಸ್ (NICE) ರಸ್ತೆಯ ಮೂಲಕ ಸಂಚರಿಸಬಹುದು.
-
ಕೊಮ್ಮಘಟ್ಟ ಜಂಕ್ಷನ್ (ಕೆಂಗೇರಿ ಕ್ಲಬ್) ನಿಂದ ಹೊಸಕೆರೆ ಗ್ರಾಮದ ಜಂಕ್ಷನ್ ವರೆಗೆ ಸರಕು ವಾಹನಗಳನ್ನು ನಿಷೇಧಿಸಲಾಗಿದೆ.
-
ಪರ್ಯಾಯ ಮಾರ್ಗ: ವಿಶ್ವೇಶ್ವರಯ್ಯ ಲೇಔಟ್ ರಿಂಗ್ ರಸ್ತೆ, ಉಲ್ಲಾಳು ಮೂಲಕ ಮಾಗಡಿ ರಸ್ತೆಗೆ ಸಂಚರಿಸಬಹುದು.
-
ನಿಧಾನಗತಿಯ ಸಂಚಾರವಿರುವ ರಸ್ತೆಗಳು: ಬೆಳಗ್ಗೆ 6 ರಿಂದ ಸಂಜೆ 4 ಗಂಟೆಯವರೆಗೆ ಈ ಕೆಳಗಿನ ಮಾರ್ಗಗಳಲ್ಲಿ ವಾಹನ ಸಂಚಾರ ನಿಧಾನವಾಗಿರಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ:
-
ಮೈಸೂರು ರಸ್ತೆಯ ಮಧು ಜಂಕ್ಷನ್ನಿಂದ ಕುಂಬಳಗೋಡು ಜಂಕ್ಷನ್ ವರೆಗೆ.
-
ನೈಸ್ ರಸ್ತೆಯ ಸೋಂಪುರ ಟೋಲ್ನಿಂದ ಮಾಗಡಿ ಮುಖ್ಯರಸ್ತೆಯ ಜಂಕ್ಷನ್ ವರೆಗೆ.
-
ಚಲ್ಲಘಟ್ಟ ಮುಖ್ಯರಸ್ತೆ ಹಾಗೂ ಕೆಂಗೇರಿ ಉಪನಗರ ರೈನ್ಬೋ ಬ್ರಿಡ್ಜ್ನಿಂದ ಕೊಮ್ಮಘಟ್ಟ ಕಡೆಗೆ.
ಸಾರ್ವಜನಿಕರು ಈ ಮಾಹಿತಿ ಗಮನಿಸಿ, ಪರ್ಯಾಯ ಮಾರ್ಗಗಳನ್ನು ಬಳಸುವ ಮೂಲಕ ಅನಗತ್ಯ ವಿಳಂಬ ಮತ್ತು ತೊಂದರೆಗಳನ್ನು ತಪ್ಪಿಸಿಕೊಳ್ಳಲು ಸೂಚಿಸಲಾಗಿದೆ.
