ಬೆಂಗಳೂರು: ರಾಜ್ಯದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ ಯೋಜನೆಯನ್ನು ಘೋಷಿಸಿರುವ ಬೆನ್ನಲ್ಲೇ, ಈಗಾಗಲೇ ಹಣ ನೀಡಿ ಬಸ್ ಪಾಸ್ ಪಡೆದುಕೊಂಡಿದ್ದ ವಿದ್ಯಾರ್ಥಿಗಳಿಗೆ ಸರ್ಕಾರ ದೊಡ್ಡ ನಿರಾಳತೆ ನೀಡಿದೆ. 2026-27ನೇ ಸಾಲಿನ ಬಸ್ ಪಾಸ್ ಶುಲ್ಕವನ್ನು ಮರುಪಾವತಿ (Refund) ಮಾಡಲು KSRTC, BMTC, NWKRTC ಮತ್ತು KKRTC ಸಾರಿಗೆ ನಿಗಮಗಳು ಅಧಿಕೃತ ಆದೇಶ ಹೊರಡಿಸಿದ್ದು, ಇಂದಿನಿಂದಲೇ ಹಣ ವಾಪಸ್ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ವಿದ್ಯಾರ್ಥಿಗಳು ಕಡ್ಡಾಯವಾಗಿ ಸೇವಾಸಿಂಧು (Seva Sindhu) ಪೋರ್ಟಲ್ ಮೂಲಕವೇ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬೇಕಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯಲ್ಲಿ OTP ಮೂಲಕ ನೋಂದಣಿ ಮಾಡಿಕೊಳ್ಳುವುದು ಹಾಗೂ ವಿದ್ಯಾರ್ಥಿಯ ನಿಖರವಾದ ಬ್ಯಾಂಕ್ ಖಾತೆಯ ವಿವರಗಳನ್ನು ನೀಡುವುದು ಕಡ್ಡಾಯವಾಗಿದೆ. ಅರ್ಜಿಗಳ ಪರಿಶೀಲನೆ ಮುಗಿದ ಕೇವಲ 7 ದಿನಗಳ ಒಳಗಾಗಿ NEFT ಅಥವಾ RTGS ಮೂಲಕ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಜಮಾವಾಗಲಿದೆ. ಬ್ಯಾಂಕ್ ವಿವರಗಳನ್ನು ತಪ್ಪಾಗಿ ನೀಡಿದರೆ ಮರುಪಾವತಿ ವಿಳಂಬವಾಗಬಹುದು ಅಥವಾ ತೊಂದರೆಯಾಗಬಹುದು ಎಂದು ಸಾರಿಗೆ ನಿಗಮಗಳು ಎಚ್ಚರಿಸಿವೆ.
